ಪಂಚತಂತ್ರದ ಕತೆಗಳಲ್ಲಿ ನರಿ ಬುದ್ದಿವಂತಿಕೆ ಹಾಗೂ ಕಪಟತನಕ್ಕೆ ಹೆಸರುವಾಸಿ . ಆಫ್ರಿಕಾದ ಜಾನಪದ ಕತೆಗಳಲ್ಲಿ ತೋಳಕ್ಕೆ ನರಿಯ ಸ್ಥಾನ . ಈ ಕತೆಯಲ್ಲಿ ಹಿಂದೆ ತೋಳದಿಂದ ಆದ ಮೋಸ ಮರೆಯದ ಸಿಂಹಕ್ಕೆ ತೋಳ ಮತ್ತೆ ಸಿಕ್ಕಿ ಬೀಳುತ್ತದೆ . ತೋಳ ಸಿಂಹದಿಂದ ಪಾರು ಹೇಗೆ ಆಗುತ್ತದೆ ಅನ್ನುವುದನ್ನು ಕೇಳೋಣ .
Oct 04, 2020•6 min•Ep. 106
ಆಫ್ರಿಕಾದಲ್ಲಿ ತಮಟೆಯ ಆಕಾರದಲ್ಲಿರೋ ಸೋರೆಕಾಯಿ ಸಿಗುತ್ತದೆ . ಸೋರೆಕಾಯಿಯ ಉಪಯೋಗ ಕೂಡ ಹತ್ತು ಹಲವು ರೀತಿಯಲ್ಲಿ . ಅಡುಗೆಯಂತೂ ಹೌದು , ಆದರೆ ಅಲ್ಲಿನ ಜನರು ಸೋರೆಕಾಯಿಯನ್ನು ಒಣಗಿಸಿ , ತಿರುಳು ತೆಗೆದು , ಅದನ್ನು ನೀರು ತುಂಬುವ ಬಿಂದಿಗೆಯಾಗಿ , ಸಾಮಗ್ರಿ ತುಂಬಿಡುವ ಪಾತ್ರೆಯಾಗಿ ಉಪಯೋಗಿಸುತ್ತಾರೆ . ಈ ಸೋರೆಕಾಯಿಯ ಬಗ್ಗೆ ಕೂಡ ಜನಪದ ಕತೆ ಇದೆ ಅಂದರೆ ಆಶ್ಚರ್ಯ ಆಗುತ್ತೆ ಅಲ್ವೇ . ಈ ಕತೆಯಲ್ಲಿ , ಮಕ್ಕಳಿಲ್ಲದ ಹೆಣ್ಣು ಮಗಳಿಗೆ ಸೋರೆಕಾಯಿಯ ಬೀಜಗಳಿಂದ ಮಕ್ಕಳು ಹುಟ್ಟಿದ ರೋಚಕ ಕತೆ ಕೇಳೋಣ .
Sep 27, 2020•10 min•Ep. 105
ಹಕ್ಕಿಗಳಿಗೆ ಸಿಂಹ ನಂತೆ ರಾಜ ಒಬ್ಬನಿದ್ದರೆ ಹೇಗಿರ್ತಿತ್ತು ಅನ್ನುವ ಪ್ರಶ್ನೆಯನ್ನು ಕತೆಯ ರೂಪದಲ್ಲಿ ಸೊಗಾಸಾಗಿ ವಿವರಿಸುತ್ತದೆ ಈ ಕತೆ
Sep 20, 2020•9 min•Ep. 104
ಆಫ್ರಿಕಾದ ಜಾನಪದ ಕತೆಗಳು ಮನುಷ್ಯ ತನ್ನ ಸುತ್ತ ಮುತ್ತಲಿನ ಪ್ರಾಣಿ , ಪಕ್ಷಿ , ಪರಿಸರವನ್ನು ಅರ್ಥ ಮಾಡಿಕೊಂಡ ಬಗೆಯನ್ನು ತಮ್ಮದೇ ರೀತಿಯಲ್ಲಿ ಹಿಡಿದಿಡುತ್ತವೆ . ಆದರೆ , ಈ ಕತೆಗಳು ಹೇಗೆ ಹುಟ್ಟಿದವು ಅನ್ನುವುದಕ್ಕೂ ಒಂದು ಕತೆ ಇದೆ ಅಂದರೆ ಆಶ್ಚರ್ಯ ಆಗುತ್ತೆ ಅಲ್ವಾ ? ಹೆಚ್ಚು ತಿಳಿಯಲು ಈ ವಾರದ ಕತೆ ಕೇಳಿ .
Sep 13, 2020•10 min•Ep. 103
"ಆಫ್ರಿಕಾದ ಜಾನಪದ ಕತೆಗಳು " ಮಾಲಿಕೆಯಲ್ಲಿ ಈ ಕತೆ ಮೊದಲನೆಯದು . ಒಟ್ಟು ನಾವು ಮಾಡಿದ ಕತೆಗಳಲ್ಲಿ ಒಂದು ನೂರನೆಯದು ಕೂಡ . ಮತ್ತೊಂದು ವಿಶೇಶ - ಈ ಕತೆ ಖ್ಯಾತ ಗಾಯಕಿ , ಕಲಾವಿದೆ ಶ್ರೀಮತಿ ಎಂ ಡಿ ಪಲ್ಲವಿ ಅವರ ನಿರೂಪಣೆ . ಅನಾಂಸಿ ಅನ್ನುವ ಜೇಡರ ಹುಳು ಪ್ರಪಂಚದ ವಿವೇಕ , ಬುದ್ದಿ ಶಕ್ತಿಯನ್ನೆಲ್ಲ ಒಟ್ಟು ಮಾಡಿ ಮಡಿಕೆಯಲ್ಲಿ ಕೂಡಿಟ್ಟು ಕೊಂಡಾಗ ಆಗಿದ್ದೇನು ? ಮುಂದಿನದನ್ನು ಪಲ್ಲವಿಯವರ ದನಿಯಲ್ಲೇ ಕೇಳಿ .
Sep 06, 2020•6 min•Ep. 102
ಈ ಸಲದ ಕತೆ ಉತ್ತರ ಕರ್ನಾಟಕ ಶೈಲಿಯಲ್ಲಿ ನಿರೂಪಿಸಿರುವ ರಾಜನೊಬ್ಬನ ಕತೆ . ರಾಜನಿಗೆ ಏನು ಮಾಡಿದರೂ ರಾತ್ರಿ ನಿದ್ರೆ ಬರುತ್ತಿರಲಿಲ್ಲ . ಎಷ್ಟೇ ಮದ್ದು , ಗುಳಿಗೆ ತಿಂದರೂ , ವ್ರತ , ದಾನ ಮಾಡಿದರೂ ನಿದ್ರೆ ಮಾತ್ರ ದೂರವೇ ಉಳಿದಿತ್ತು . ಅಷ್ಟೆಲ್ಲ ಕಷ್ಟ ಪಟ್ಟರೂ ಗುಣವಾಗದ ರಾಜನ ನಿದ್ರೆ ಖಾಯಿಲೆಯನ್ನ ಒಬ್ಬ ಸಾಮಾನ್ಯ ಮರ ಕಡಿಯುವವ ಗುಣ ಪಡಿಸಿದ್ದು ಹೇಗೆ . ? "ಮಂಗ್ಯಾ , ಮೊಸಳಿ ಕತಿ " ಆದಮೇಲೆ ಉತ್ತರ ಕರ್ನಾಟಕ ಶೈಲಿಯಲ್ಲಿ ನಿರೂಪಿಸಿರುವ ಎರಡನೇ ಕತೆ ಇದು .
Aug 29, 2020•13 min•Ep. 101
ಈ ಕಂತು ೨೦೧೯ ರ ಗಣೇಶ ಹಬ್ಬದ ಸಮಯದಲ್ಲಿ ಮಾಡಿದ ಕತೆ . ಈ ವರ್ಷದ ಗೌರಿ ಗಣೇಶ ಹಬ್ಬಕ್ಕೆ ಶಮಂತಕ ಮಣಿಯ ಕತೆ .
Aug 22, 2020•11 min•Ep. 100
ಏನು ? ಸಿಂಹದಂಥ ಬಲಿಷ್ಠ ಪ್ರಾಣಿ ಎಲ್ಲಿ ? ಮೊಲದಂಥ ಪೀಚು ಪ್ರಾಣಿ ಎಲ್ಲಿ ? ಆದರೂ ಸಿಂಹದ ಶಕ್ತಿಯ ಮುಂದೆ ಮೊಲದ ಯುಕ್ತಿಯೇ ಮೇಲಾಯಿತು . ಒಂದೊಂದು ಸಲ ನಮ್ಮ ಮುಂದೆ ಕೆಟ್ಟದ್ದು ನಡೆಯುತ್ತಿದ್ದರೂ , ಅಸಹಾಯಕರಾಗುವುದು ಸಹಜ . ಅದರಲ್ಲೂ ಎದುರಾಳಿ ಬಲಿಷ್ಠನಾಗಿದ್ದರಂತೂ , ಇನ್ನೇನು ಎಲ್ಲ ಮುಗಿದೇ ಹೋಯಿತು ಅನ್ನಿಸುವಾಗ , ಈ ಕತೆ ಸ್ಫೂರ್ತಿ ಕೊಡುತ್ತದೆ .
Aug 09, 2020•6 min•Ep. 99
" ಟೋಪಿ ಬೇಕಾ ಟೋಪಿ " ಅಂತ ಕೂಗುತ್ತಾ ಬರುವ ಟೋಪಿ ಮಾರುವವನ ಕತೆ ಶಾಲೆಗಳಲ್ಲಿ ನಾಟಕದ ರೂಪದಲ್ಲೋ , ಪಠ್ಯದಲ್ಲೋ ನೋಡದವರು ಕಡಿಮೆ . ಈಗ ಈ ಕತೆಯನ್ನು ಈಗಿನ ಪುಟಾಣಿಗಳೂ ಕೇಳಬಹುದು . ಟೋಪಿ ಮಾರುವವನ ಟೋಪಿಗಳನ್ನು ಚೇಷ್ಟೆ ಮಂಗಗಳು ಹೊತ್ತುಕೊಂಡು ಮರದ ಮೇಲೆ ಹತ್ತಿ ಕುಳಿತಾಗ ಟೋಪಿ ಮಾರುವವ ವಾಪಸ್ ಪಡೆಯೋದಕ್ಕೆ ಏನೆಲ್ಲಾ ಸಾಹಸ ಮಾಡಬೇಕಾಯ್ತು ಅನ್ನುವುದನ್ನು ಈ ಕತೆ ತಿಳಿ ಹಾಸ್ಯದೊಂದಿಗೆ ಹೇಳುತ್ತದೆ .
Aug 02, 2020•5 min•Ep. 98
ಮಾತು ಹಿತ , ಮಿತವಾಗಿರಬೇಕು ಅನ್ನುತ್ತಾರೆ . ಜತೆಗೆ ಸಮಯೋಚಿತವಾಗಿರಬೇಕು ಕೂಡ . ಸಲ್ಲದ ಜಾಗದಲ್ಲಿ ಬೇಡ ಮಾತುಗಳಾಡಿದರೆ ತೊಂದರೆ ತಪ್ಪಿದ್ದಲ್ಲ ಅನ್ನುವುದಕ್ಕೆ ಈ ಕತೆ ಒಳ್ಳೆಯ ಉದಾಹರಣೆ . ಸಹಾಯ ಬೇಕಾಗಿದ್ದ ಆಮೆಯೊಂದಕ್ಕೆ , ಬಾತುಕೋಳಿಗಳು ಸಹಾಯ ಮಾಡುವುದಕ್ಕೆ ಮೊದಲು ಒಂದು ಷರತ್ತು ಹಾಕಿದವು . ಆಮೇಲೆ ಏನಾಯ್ತು ಅನ್ನೋದನ್ನ ಕತೆಯಲ್ಲಿ ಕೇಳಿ .
Jul 25, 2020•5 min•Ep. 97
ಉಪಕಾರ ಮಾಡಿದವರನ್ನು ಇಂದಿಗೂ ಮರೆಯಬಾರದು ಅಂತ ಗಾದೆಯ ಹಾಗೆ , ಪುಟ್ಟ ಇರುವೆಯೂ , ದೊಡ್ಡ ಪಾರಿವಾಳವೂ ಒಬ್ಬರಿಗೊಬ್ಬರು ಉಪಕಾರ ಮಾಡಿದ್ದು ಹೇಗೆ . ? ಪುಟ್ಟ ಇರುವೆಯಿಂದ ದೊಡ್ಡ ಪಾರಿವಾಳಕ್ಕೆ ಆದ ಉಪಕಾರವಾದರೂ ಏನು . ? ಬನ್ನಿ, ಈ ಕತೆಯಲ್ಲಿ ತಿಳಿದುಕೊಳ್ಳೋಣ .
Jul 19, 2020•4 min•Ep. 96
ಮೊಟ್ಟೆ ಇಡುವ ಕೋಳಿ , ಬಾತು ಕೋಳಿಯ ಬಗ್ಗೆ ಕೇಳಿರ್ತೀರ , ಆದರೆ ಚಿನ್ನದ ಮೊಟ್ಟಿ ಇಡುವ ಬಾತು ಕೋಳಿಯ ಬಗ್ಗೆ ಕೇಳಿದ್ದೀರಾ ? ಚಿನ್ನದ ಮೊಟ್ಟೆ ಇಡುವ ಬಾತು ಕೋಳಿಯನ್ನು ನೋಡಿ ರೈತನ ಹೆಂಡತಿ ಅಸೆ ಪಟ್ಟಿದ್ದೆ ಬೇರೆ , ಆದರೆ ಆದದ್ದೇ ಬೇರೆ . ದುರಾಸೆ ಪಟ್ಟರೆ ದುಃಖ ತಪ್ಪಿದ್ದಲ್ಲ ಅನ್ನುವುದಕ್ಕೆ ಈ ಕತೆ ಒಳ್ಳೆಯ ಉದಾಹರಣೆ .
Jul 12, 2020•3 min•Ep. 95
ಈ ವಾರ ಮತ್ತೊಂದು ಜನಪ್ರಿಯ ಕತೆ " ಮರ ಕಡಿಯುವವನ ಕತೆ ". ಪಂಚತಂತ್ರದ ಕತೆಗಳು ಅಂದ ತಕ್ಷಣ ನೆನಪು ಬರುವ ಕತೆಗಳಲ್ಲಿ ಈ ಕತೆ ಪ್ರಮುಖವಾದದ್ದು . ಪ್ರಾಮಾಣಿಕತೆ , ಸತ್ಯ ನಿಷ್ಠತೆ , ಸರಳತೆ ಅಂತಹ ಗುಣಗಳು ಈ ಕತೆಯಲ್ಲಿ ವಿಶೇಷವಾಗಿ ಕಾಣಸಿಗುತ್ತವೆ .
Jul 05, 2020•4 min•Ep. 94
ದಾರಿ ತಪ್ಪಿಸಿಕೊಂಡ ಮೇಕೆ ಮರಿ ಒಂದು ತೋಳದ ಕೈಗೆ ಸಿಕ್ಕಾಗ , ತುಂಬಾ ಭಯವಾದರೂ , ಸರಿಯಾದ ಸಮಯಕ್ಕೆ ಉಪಾಯವೊಂದನ್ನು ಮಾಡಿ ತೋಳವನ್ನು ಹೆದರಿ ಓಡಿ ಹೋಗುವಂತೆ ಮಾಡ್ತು . ತೋಳ ಹೆದರಿ ಓಡಿದ್ದು ಯಾಕೆ ? ಅಂತ ತಿಳಿಯಲು ಈ ಮುದ್ದಾದ ಕತೆ ಕೇಳಿ
Jun 28, 2020•4 min
ದಾರಿ ತಪ್ಪಿಸಿಕೊಂಡ ಮೇಕೆ ಮರಿ ಒಂದು ತೋಳದ ಕೈಗೆ ಸಿಕ್ಕಾಗ , ತುಂಬಾ ಭಯವಾದರೂ , ಸರಿಯಾದ ಸಮಯಕ್ಕೆ ಉಪಾಯವೊಂದನ್ನು ಮಾಡಿ ತೋಳವನ್ನು ಹೆದರಿ ಓಡಿ ಹೋಗುವಂತೆ ಮಾಡ್ತು . ತೋಳ ಹೆದರಿ ಓಡಿದ್ದು ಯಾಕೆ ? ಅಂತ ತಿಳಿಯಲು ಈ ಮುದ್ದಾದ ಕತೆ ಕೇಳಿ .
Jun 28, 2020•4 min•Ep. 3
ಇಂದಿನ ಸಂಚಿಕೆಯಲ್ಲಿ ಜನಪ್ರಿಯ ಕತೆ "ಆಮೆ ಮತ್ತು ಮೊಲ "ದ ಕತೆ . ಪ್ರಪಂಚದ ನಾನಾ ಭಾಷೆಗಳಲ್ಲಿ ಹೇಳಪಡುವ ಈ ಕತೆ ಮಕ್ಕಳಿಂದ ದೊಡ್ಡವರ ತನಕ ಎಲ್ಲರೂ ಕೇಳಿ ಖುಷಿ ಪಡಬಹುದಾದದ್ದು . ನೀವೂ ಕೇಳಿ , ಬೇರೆಯವರಿಗೂ ತಿಳಿಸಿ . ಕತೆಯನ್ನು ಕೇಳುವ ಅನುಭವವನ್ನು ಇನ್ನಷ್ಟು ಹೆಚ್ಚುಗೊಳಿಸಲು , ಈ ಕತೆ ಇರುವ ಪುಸ್ತಕವನ್ನು ಮಕ್ಕಳಿಗೆ ಓದಿ ಹೇಳಿ . ನಂತರ , ನಮ್ಮ ವೆಬ್ಸೈಟ್ ನಲ್ಲಿರುವ ಚಿತ್ರ ಪುಟಗಳನ್ನು ಇಳಿಸಿಕೊಂಡು ಬಣ್ಣ ಹಚ್ಚಿ ಖುಷಿ ಪಡಿ .
Jun 21, 2020•7 min•Ep. 3
ನರಿ ಮತ್ತು ಡೊಳ್ಳು, ಪಂಚತಂತ್ರದ ಜನಪ್ರಿಯ ಕತೆಗಳಲ್ಲೊಂದು . ಕಾಡಿನಲ್ಲಿ ಬರುತ್ತಿದ್ದ ಸದ್ದು ಯಾವುದೋ ಭಯಂಕರ ಪ್ರಾಣಿಯದೇ ಇರಬೇಕು ಅಂತ ಹೆದರಿಕೆಯಿಂದ ಹೆಜ್ಜೆಯಿಡುತ್ತಿದ್ದ ನರಿಗೆ ಡೊಳ್ಳು ನೋಡಿ ಇಷ್ಟೇನಾ ಅಂತ ಅನ್ನಿಸಿತು . ಆದರೆ , ಡೊಳ್ಳು ಬಡಿಯುತ್ತಿದ್ದವರು ಯಾರು ? ತಿಳಿಯಲು ಕತೆ ಕೇಳಿ
Jun 14, 2020•6 min•Ep. 1
" ಇನಿ ದನಿ " - ಸರಕಾರೀ ಹಿರಿಯ ಪ್ರಾಥಮಿಕ ಶಾಲೆ ,ನೆಟ್ಲ ಮಕ್ಕಳು ನಡೆಸಿಕೊಡುತ್ತಿರುವ ಆಡಿಯೋ ಸರಣಿ . ಈ ವಾರದ ಕಾರ್ಯಕ್ರಮದಲ್ಲಿ ಮಕ್ಕಳು "ತಾಯಿ ಶಾರದೆ " ಎಂಬ ಪದ್ಯ , "ಸರಕಾರೀ ಕನ್ನಡ ಶಾಲೆಯ " ಬಗ್ಗೆ ಒಂದು ಪುಟ್ಟ ಕತೆ , ಹಾಗೂ ಕೊನೆಯಲ್ಲಿ ಒಂದು ಸಂಭಾಷಣೆ. "ಅಯ್ಯೋ , ಸರಕಾರೀ ಶಾಲೆಯೇ ? ಅಲ್ಲೇನಿದೆ ? ಅಲ್ಲಿಗೆ ಯಾಕೆ ಮಕ್ಕಳನ್ನು ಕಳಿಸಬೇಕು ?" ಅನ್ನುವ ಈಗಿನ ಪರಿಸ್ಥಿತಿಯಲ್ಲಿ ಈ ಶಾಲೆಯ ಮಕ್ಕಳು ತೋರಿಸಿರುವ ಕ್ರಿಯಾತ್ಮಕ ಶಕ್ತಿ , ಪ್ರತಿಭೆ ಈ ಆಡಿಯೋ ಸರಣಿಯಲ್ಲಿ ಸ್ಪಷ್ಟವಾಗಿ ಕಾಣಿಸಿದೆ . "ಎಲ್ಲಾ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳು ಇದ್ದರೆ ಎಷ್ಟು ಚಂದ ? " ಅನ್ನುವ ಪ್ರತಿಕ್ರಿಯೆಗಳು ಬಹಳಷ್ಟು ಬಂದಿವೆ . ...
Jun 07, 2020•8 min
" ಇನಿ ದನಿ " - ಸರಕಾರೀ ಹಿರಿಯ ಪ್ರಾಥಮಿಕ ಶಾಲೆ ,ನೆಟ್ಲ ಮಕ್ಕಳು ನಡೆಸಿಕೊಡುತ್ತಿರುವ ಆಡಿಯೋ ಸರಣಿ . ಈ ವಾರದ ಕಾರ್ಯಕ್ರಮದಲ್ಲಿ ಮಕ್ಕಳು "ಮಂಗಳ ಗ್ರಹದಲ್ಲಿ ಪುಟ್ಟಿ " ಎಂಬ ಪದ್ಯ , "ಗಂಧರ್ವ ಸೇನಾ " ಅನ್ನುವ ಹಾಸ್ಯ ನಾಟಕ ನಡೆಸಿಕೊಡುತ್ತಾರೆ . ಇಂಪಾದ ಹಿನ್ನಲೆ ಸಂಗೀತ , ಹಾಸ್ಯಭರಿತ ಸಂಭಾಷಣೆ ಇರುವ ಈ ನಾಟಕ ಹಾಗೂ ಮುದ್ದಾದ ಕಾವ್ಯ ವಾಚನ ಮಕ್ಕಳಿಗೆ ಇಷ್ಟವಾಗುವುದರಲ್ಲಿ ಸಂದೇಹವಿಲ್ಲ .
May 31, 2020•9 min•Ep. 15
" ಇನಿ ದನಿ " - ಸರಕಾರೀ ಹಿರಿಯ ಪ್ರಾಥಮಿಕ ಶಾಲೆ ,ನೆಟ್ಲ ಮಕ್ಕಳು ನಡೆಸಿಕೊಡುತ್ತಿರುವ ಆಡಿಯೋ ಸರಣಿ . ಈ ವಾರದ ಕಾರ್ಯಕ್ರಮದಲ್ಲಿ "ಬೆಣ್ಣೆ ಕರಗಿತು " ಅನ್ನುವ ನಾಟಕ ನಡೆಸಿಕೊಡುತ್ತಾರೆ . ಇಂಪಾದ ಹಿನ್ನಲೆ ಸಂಗೀತ , ಹಾಸ್ಯಭರಿತ ಸಂಭಾಷಣೆ ಇರುವ ಈ ನಾಟಕ ಮಕ್ಕಳಿಗೆ ಇಷ್ಟವಾಗುವುದರಲ್ಲಿ ಸಂದೇಹವಿಲ್ಲ . ಕದ್ದು ತಂದ ಬೆಣ್ಣೆಯ ಸಲುವಾಗಿ ಜಗಳವಾಡುತ್ತಿದ್ದ ಎರಡು ಬೆಕ್ಕುಗಳಿಗೆ ಚಳ್ಳೆಹಣ್ಣು ತಿನಿಸುವ ಯೋಜನೆ ಮಾಡಿದ ಮಂಗಪ್ಪ ತಾನೇ ಪೇಚಿಗೆ ಸಿಕ್ಕಿದ ಈ ಕತೆ ಕೇಳೋಕೆ ಬಲು ಮೋಜು .
May 17, 2020•11 min•Ep. 2
" ಇನಿ ದನಿ " - ಸರಕಾರೀ ಹಿರಿಯ ಪ್ರಾಥಮಿಕ ಶಾಲೆ ,ನೆಟ್ಲ ಮಕ್ಕಳು ನಡೆಸಿಕೊಡುತ್ತಿರುವ ಆಡಿಯೋ ಸರಣಿ . ಈ ವಾರದ ಕಾರ್ಯಕ್ರಮದಲ್ಲಿ ಚೂಟಿ ಮಕ್ಕಳಿಂದ ಪುಟ್ಟ ಹಾಡು , ಕಥೆ ನಿರೂಪಣೆ , ನಾಟಕ , ಪ್ಲಾಸ್ಟಿಕ್ ಬಳಕೆಯ ಬಗ್ಗೆ ಕೆಲವು ಮಾತುಗಳು. " ಕೇಳಿರೊಂದು ಕಥೆಯ " ತಂಡಕ್ಕೆ ಇದೊಂದು ವಿನೂತನ ಪ್ರಯತ್ನ . ನೀವೂ ಕೇಳಿ , ನಿಮ್ಮ ಮಕ್ಕಳಿಗೂ ಕೇಳಿಸಿ . ಈ ಕಾರ್ಯಕ್ರಮ ಕೇಳಿದ ಮೇಲೆ , ನಿಮ್ಮ ಮಕ್ಕಳೂ "ಅಮ್ಮಾ , ನಾನೂ ಕಥೆ ಹೇಳ್ತೇನೆ " ಅಂತ ಹೇಳಬಹುದು . ನಿಮ್ಮೆಲ್ಲ ಬೆಂಬಲಕ್ಕಾಗಿ ಧನ್ಯವಾದಗಳು .
May 10, 2020•6 min•Ep. 1
ಕಳೆದ ಶುಕ್ರವಾರ , ಏಪ್ರಿಲ್ ೨೪ , ಡಾ ರಾಜ್ ಕುಮಾರ್ ಅವರ ಹುಟ್ಟುಹಬ್ಬ . ಸದಭಿರುಚಿಯ ಚಲನಚಿತ್ರಗಳ ಮೂಲಕ ಅಷ್ಟೇ ಅಲ್ಲ , ಕನ್ನಡಿಗರ ದನಿಯಾಗಿ , ಮಾನವತಾವಾದಿಯಾಗಿ ರಾಜ್ ಕುಮಾರ್ ಕನ್ನಡಿಗರಿಗೆ ಚಿರಪರಿಚಯ . 1990 ರಿಂದ ಮುಂಚೆ ಹುಟ್ಟಿದ ಕನ್ನಡಿಗರಿಗೆ ರಾಜ್ ಕುಮಾರ್ ಪರಿಚಯವೇ ಬೇಡ . ಆದರೆ , ಮಕ್ಕಳಿಗೆ ರಾಜಕುಮಾರ್ ಅವರ ಪರಿಚಯ ಮಾಡುವ ಪ್ರಯತ್ನ ಆದಂತಿಲ್ಲ . ರಾಜಕುಮಾರ್ ಹುಟ್ಟುಹಬ್ಬದ ನೆನಪಿನಲ್ಲಿ , " ಮಕ್ಕಳಿಗಾಗಿ ಡಾ ರಾಜಕುಮಾರ್ " , ಅವರ ವ್ಯಕ್ತಿತ್ವದ ಕಿರು ಪರಿಚಯ , ಪುಟ್ಟ ಮಕ್ಕಳಿಗಾಗಿ .
May 02, 2020•10 min•Ep. 14
ಭಾರತೀಯ ಸಂಸ್ಕೃತಿಯಲ್ಲಿ ಪ್ರತಿ ಜೀವಿ , ವಸ್ತುವಿಗೂ ಒಂದು ಸ್ವಾರಸ್ಯಕರ ಕತೆಯುಂಟು . ಕಾಡಿನಲ್ಲಿ ಬಿದ್ದಿರುವ ಬಳ್ಳಿಗೊಂದು ಕತೆ , ದೂರದಲ್ಲಿ ಕಾಣುವ ಬಂಡೆಗೂ ಒಂದು ಕತೆ . ಇಷ್ಟಿದ್ದಾಗ , ಭಾರತದ ಪವಿತ್ರ ನದಿ ಗಂಗೆಗೂ ಒಂದು ಕತೆ ಇರಲೇ ಬೇಕಲ್ವೆ ?
Apr 26, 2020•9 min•Ep. 13
ಮಹಾಭಾರತದಲ್ಲಿ ಬರುವ ಅಪೂರ್ವ ಪಾತ್ರ ಹನುಮಂತ . ಹನುಮಂತ ಹಾಗೂ ಭೀಮ ಪರಸ್ಪರ ಭೇಟಿಯಾಗಿ , ಹನುಮಂತ ಭೀಮನ ಜತೆ ಕುಚೇಷ್ಟೆ ಮಾಡುವ ಕತೆ ಓದುವುದಕಷ್ಟೇ ಅಲ್ಲ , ಕೇಳುವುದಕ್ಕೂ ಬಹಳ ಚಂದ .
Apr 18, 2020•9 min•Ep. 11
ದಶಾವತಾರ ಸರಣಿಯನ್ನು ಮಾಡ ಹೊರಟಾಗ , ವಿಷ್ಣುವಿನ ಹತ್ತು ಅವತಾರಗಳಷ್ಟೇ ಅಂತ ಅಂದು ಕೊಂಡಿದ್ದೆವು . ಪ್ರತಿ ಅವತಾರದ ಕತೆ ಬರೆಯುತ್ತಾ ಹೋದಾಗ , ತಿಳಿದದ್ದು ವೇದ , ಪುರಾಣಗಳಲ್ಲಿ , ವಿಷ್ಣುವಿನ 35ಕ್ಕೂ ಅವತಾರಗಳಿವೆ ಅಂತ . "ದಶಾವತಾರ " ಸರಣಿಯ ಕೊನೆಯ ಕಂತಿನಲ್ಲಿ , ಇತರ ಕೆಲವು ಅವತಾರಗಳ ಕಿರು ಪರಿಚಯ.
Apr 12, 2020•6 min•Ep. 10
ದಶಾವತಾರದ ಸುಮಾರು ಅವತರಣಿಕೆ ( versions) ಗಳಲ್ಲಿ ಬುದ್ಧ ಹತ್ತು ಅವತಾರಗಳಲ್ಲಿ ಒಂದು ಪರಿಗಣಿಸುತ್ತಾರೆ . ಈ ಕಂತಿನಲ್ಲಿ ಗೌತಮ ಬುದ್ಧನ ಕಿರು ಪರಿಚಯ ಹಾಗೂ ಬುದ್ಧ ಹುಡುಗನಾಗಿದ್ದ ಸಮಯದ ಒಂದು ಪುಟ್ಟ ಕತೆಯನ್ನು ಹೇಳಲಾಗಿದೆ. Photo Courtesy - Pari's Photography
Apr 05, 2020•7 min•Ep. 9
A special episode about the mysterious Corona Virus ( COVID19) featuring Dr. Prakash and Dr. Sumana Kabbur , where we answer some questions sent by our young listeners. ಕೊರೊನ ವೈರಸ್ ಬಗ್ಗೆ ನಮ್ಮ ಪುಟಾಣಿ ಕೇಳುಗರು ಕಳಿಸಿದ ಪ್ರಶ್ನೆಗಳಿಗೆ ಈ ಕಂತಿನಲ್ಲಿ ಡಾ . ಪ್ರಕಾಶ್ ಹಾಗೂ ಡಾ . ಸುಮನಾ ಕಬ್ಬೂರ್ ಅವರು ಉತ್ತರಿಸಿದ್ದಾರೆ . ಮನೆಯೊಳಗೆ ಪಾಲಿಸಬಹುದಾದ ಮಾದರಿ ವೇಳಾಪಟ್ಟಿ ಇಲ್ಲಿದೆ . To learn more about the amazing job TrainAndHelp Babies is doing to increase newborn survival rate , visit https://www.trainandhelpbabies.com/ ....
Mar 29, 2020•13 min•Ep. 2
" ದಶಾವತಾರ " ಸರಣಿಯ ಎಂಟನೆಯ ಅವತಾರ ಶ್ರೀ ಕೃಷ್ಣನ ಅವತಾರ . ರಾಮ, ಕೃಷ್ಣರ ಕತೆಗಳು ಪ್ರತಿಯೊಬ್ಬರಿಗೂ ಚಿರ ಪರಿಚಿತ . ಕೃಷ್ಣನ ಜೀವನ ಚರಿತ್ರೆಯನ್ನು ಸರಳವಾಗಿ , ಚೊಕ್ಕವಾಗಿ ಈ ಕತೆಯಲ್ಲಿ ಮುಂದಿಡಲಾಗಿದೆ .
Mar 22, 2020•8 min•Ep. 8
" ದಶಾವತಾರ " ಸರಣಿಯ ಏಳನೇ ಕಂತು ರಾಮನ ಅವತಾರ . ರಾಮಾಯಣ , ಮನೆ ಮನೆಯ ದಿನ ಜೀವನದಲ್ಲಿ ಹಾಸು ಹೊಕ್ಕಾಗಿರುವ ಮಹಾ ಕಾವ್ಯ . ದೇವರ ಮನೆಯ ಪೂಜೆಯಿಂದ ಹಿಡಿದು , ಕುಳಿತಾಗೊಂದು ಸಲ "ರಾಮ ರಾಮ " ಅನ್ನುವ ಅಜ್ಜಿಯರ ತನಕ , ರಾಮ ಸೀತೆಯರು ನಮ್ಮ ಜೀವನದ ಭಾಗವಾಗಿ ಬಿಟ್ಟಿದ್ದಾರೆ . ! ಅಷ್ಟು ದೊಡ್ಡ ಕತೆಯನ್ನು 8 ನಿಮಿಷದಲ್ಲಿ ಸರಳವಾಗಿ ಹೇಳುವ ಪುಟ್ಟ ಪ್ರಯತ್ನ ಈ ಕತೆ .
Mar 14, 2020•9 min•Ep. 7
" ದಶಾವತಾರ " ಸರಣಿಯಲ್ಲಿ ಆರನೆಯ ಅವತಾರ ಪರಶುರಾಮನ ಅವತಾರ . ಪರಶುರಾಮ ಅತಿ ಪರಾಕ್ರಮಿ . ಬ್ರಾಹ್ಮಣನಾಗಿದ್ದೂ , ಕ್ಷತ್ರಿಯರಿಗೆ ಸಿಂಹ ಸ್ವಪ್ನನಾಗಿದ್ದ. ಪರಶುರಾಮನ ಬಗ್ಗೆ ಸಾಮಾನ್ಯವಾಗಿ ಸಿಗುವ ಕತೆಗಳು ಮಕ್ಕಳಿಗೆ ಸ್ವಲ್ಪ ಹೆಚ್ಚೇ ಹಿಂಸೆ ಅನ್ನಿಸಬಹುದು ಎಂದು , ಪರಶುರಾಮ ಮತ್ತು ಗಣೇಶನನ್ನು ಒಳಗೊಂಡ ಅಪರೂಪದ ಒಂದೆರಡು ಕಥೆಗಳನ್ನು ಸೇರಿಸಿದ್ದೇವೆ . ಕಥೆ ಕೇಳಿ , ನಿಮ್ಮ ಅಭಿಪ್ರಾಯ , ಅನಿಸಿಕೆಗಳನ್ನು kelirondu@gmail.com ಗೆ ಕಳಿಸಿ .
Mar 08, 2020•9 min•Ep. 5